ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ಸರ್ಕಾರದ ಆದೇಶ ಸಂಖ್ಯೆ ಸಕಇ 09 ಪವಯೋ 2010, ದಿನಾಂಕ: 26/10/2010ರ ಆದೇಶದನ್ವಯ ಜುಲೈ 2011 ರಲ್ಲಿ ಮೈಸೂರಿನಲ್ಲಿ ಸ್ಥಾಪಿಸಿದೆ. ಅಂದಿನಿಂದಲೂ ಬಾಡಿಗೆಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಯು ಆಗಸ್ಟ್ 2022ರ ಮಾಹೆಯಿಂದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸರ್ಕಾರದ ಆದೇಶ ಸಂಖ್ಯೆ ಸಕಇ 251 ಪವಯೋ 2013 ದಿನಾಂಕ: 19/11/2013ರ ಆದೇಶದನ್ವಯ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ (1958) ನಿಯಮ 8(21)ರಅನ್ವಯ ಇಲಾಖಾ ಮುಖ್ಯಸ್ಥರೆಂದು ಘೋಷಿಸಿ, ಸರ್ಕಾರದ ಪತ್ರ ಸಂಖ್ಯೆ ಸಕಇ 152 ಪವಯೋ 2015 ದಿನಾಂಕ 21/08/2015 ರಲ್ಲಿ ಆರ್ಥಿಕ ಪ್ರತ್ಯಾಯೋಜನೆ ಆದೇಶ ಸಂಖ್ಯೆ ಆಇ 02 ಟಿಎಫ್‍ಪಿ 2010, ದಿನಾಂಕ: 30/04/2010ರಲ್ಲಿ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಅಧಿಕಾರವನ್ನು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಚಲಾಯಿಸಲು ಅನುಮತಿ ನೀಡಲಾಗಿದೆ.   ಮುಂದೆ ಓದಿ

ಸುದ್ದಿ ಮತ್ತು ಕಾರ್ಯಕ್ರಮಗಳು

Dharti Aaba Janbhagidari Abhiyan

Nationwide Awareness and benefit Saturation campaign

15th June – 30th June 2025

TWO DAY SEMINAR ON TRIBAL EDUCATION : ISSUES AND CHALLENGES

DATE : 2nd and 3rd June 2025