# ಸಿಎ-03, ಖಜಾನೆ ನೌಕರರ ಬಡಾವಣೆ, ಕೇರ್ಗಳ್ಳಿ, ಮೈಸೂರು – 570026

 0821-2560275   trimysore@gmail.com

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ಸರ್ಕಾರದ ಆದೇಶ ಸಂಖ್ಯೆ ಸಕಇ 09 ಪವಯೋ 2010, ದಿನಾಂಕ: 26/10/2010ರ ಆದೇಶದನ್ವಯ ಜುಲೈ 2011 ರಲ್ಲಿ ಮೈಸೂರಿನಲ್ಲಿ ಸ್ಥಾಪಿಸಿದೆ. ಅಂದಿನಿಂದಲೂ ಬಾಡಿಗೆಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಯು ಆಗಸ್ಟ್ 2022ರ ಮಾಹೆಯಿಂದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸರ್ಕಾರದ ಆದೇಶ ಸಂಖ್ಯೆ ಸಕಇ 251 ಪವಯೋ 2013 ದಿನಾಂಕ: 19/11/2013ರ ಆದೇಶದನ್ವಯ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ (1958) ನಿಯಮ 8(21)ರಅನ್ವಯ ಇಲಾಖಾ ಮುಖ್ಯಸ್ಥರೆಂದು ಘೋಷಿಸಿ, ಸರ್ಕಾರದ ಪತ್ರ ಸಂಖ್ಯೆ ಸಕಇ 152 ಪವಯೋ 2015 ದಿನಾಂಕ 21/08/2015 ರಲ್ಲಿ ಆರ್ಥಿಕ ಪ್ರತ್ಯಾಯೋಜನೆ ಆದೇಶ ಸಂಖ್ಯೆ ಆಇ 02 ಟಿಎಫ್‍ಪಿ 2010, ದಿನಾಂಕ: 30/04/2010ರಲ್ಲಿ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಅಧಿಕಾರವನ್ನು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಚಲಾಯಿಸಲು ಅನುಮತಿ ನೀಡಲಾಗಿದೆ

ಸುದ್ದಿ ಮತ್ತು ಕಾರ್ಯಕ್ರಮಗಳು
				
					console.log( 'Code is Poetry' );